Stories in Kannada ಮಾತು ಬಲ್ಲವನಿಗೆ ಜಗಳವಿಲ್ಲ , ಊಟ ಬಲ್ಲವನಿಗೆ ರೋಗವಿಲ್ಲ web news kannada



ಕಾಡಿನ ಒಂದು ಮರದ ಮೇಲೆ ಒಂದು ಕೋಗಿಲೆ ವಾಸವಾಗಿತ್ತು . ಅದೇ ಮರದ ‘ 

ಮೇಲೆ ಬೇರೆ ಕೆಲವು ಪಕ್ಷಿಗಳು ವಾಸವಾಗಿದ್ದವು , ಕೋಗಿಲೆಗೆ ಖುಷಿಯಾದಾಗ ಅದು ಹಾಡುತ್ತಿತ್ತು ,

ಇದರಿಂದ ಬೇರೆ ಪಕ್ಷಿಗಳಿಗೆ ಕಿರಿಕಿರಿಯಾಗುತ್ತಿತ್ತು . ಒಂದು ದಿನ ಎಲ್ಲ ಪಕ್ಷಿಗಳು ಸೇರಿ ಅದನ್ನು ಅಲ್ಲಿಂದ ಓಡಿಸಿದವು .

 ಅದು ಕಾಡಿನ ಹೊರಗೆ ಇರುವ ಒಂದು ಒಣಮರದ ಮೇಲೆ ಹೋಗಿ ಕುಳಿತುಕೊಂಡಿತು .

ಅಷ್ಟರಲ್ಲೇ ಮತ್ತೊಂದು ಕೋಗಿಲೆ ಅಲ್ಲಿಗೆ ಬಂತು. ತನ್ನ ಬಂಧುವೊಂದು ನಿರಾಶೆಯಿಂದ ಕುಳಿತಿರುವುದನ್ನು ಕಂಡು ಅದರ

 ನಿರಾಶೆಗೆ ಕಾರಣ ಏನೆಂದು ಕೇಳಿತು.

ಅದಕ್ಕೆ ಮೊದಲನೆಯ ಕೋಗಿಲೆ ‘ ನಾನು ಕಾಡಿನಲ್ಲಿರುವ ಒಂದು ಮರದ ಮೇಲೆ ವಾಸಿಸುತ್ತಿದ್ದೆ . ನನಗೆ ಖುಷಿಯಾದಾಗ

 ಹಾಡುತ್ತಿದ್ದೆ . ಒಂದು ದಿನ ಆ ಮರದ ಮೇಲೆ ವಾಸವಾಗಿದ್ದ ಬೇರೆ ಪಕ್ಷಿಗಳು ‘ ನೀನೇಕೆ ಹಾಡುವಿ ? ” ಎಂದು ಕೇಳಿದವು

 . ಅದಕ್ಕೆ ನಾನು ನನ್ನ ಸಂತೋಷಕ್ಕಾಗಿ ಹಾಡುತ್ತೇನೆ .

ಹಾಡದೇ ನಾನು ಬದುಕಿರಲಾರೆ ಎಂದು ಹೇಳಿದೆ . ಆಗ ಎಲ್ಲ ಪಕ್ಷಿಗಳು ಸೇರಿ ನನ್ನನ್ನು ಅಲ್ಲಿಂದ ಓಡಿಸಿಬಿಟ್ಟವು ‘ ಎಂದು

 ಹೇಳಿತ್ತು . ಆಗ ಎರಡನೆಯ ಕೋಗಿಲೆ ‘ ನೀನು ಅವಕ್ಕೆ ತಪ್ಪು ಉತ್ತರ ಕೊಟ್ಟಿರುವೆ .

ಅದಕ್ಕೆ ಹಾಗಾಗಿದೆ ನಿನ್ನ ಉತ್ತರದಿಂದ ಅವು ನೀನೊಬ್ಬ ಸ್ವಾರ್ಥ. ನಿನ್ನ ಮೇಲೆ ನಿನಗೆ ನಿಯತ್ರಣವಿಲ್ಲ ಎಂದು

 ತಿಳಿದುಬಿಟ್ಟಿವೆ .

ನನಗೂ ಆ ಪಕ್ಷಿಗಳು ಅದೇ ಪ್ರಶ್ನೆಯನ್ನು ಕೇಳಿದ್ದವು . ಅದಕ್ಕೆ ನಾನು ‘ ನಾನು ನಿಮ್ಮನ್ನು ಖುಷಿಪಡಿಸುವದಕ್ಕಾಗಿ

 ಹಾಡುತ್ತೇನೆ ‘ ಎಂದು ಹೇಳಿದ್ದೆ .

ಆದ್ದರಿಂದ ನಾನು ಈಗಲೂ ಅವುಗಳ ಜೊತೆಯಲ್ಲಿಯೇ ವಾಸಿಸುತ್ತಿದ್ದೇನೆ ಎಂದು ಹೇಳಿತು . ನಾವು ಆಡುವ ಮಾತು

 ತುಂಬ ಜಾಣ್ನೆಯಿಂದ ಕೊಡಿರಬೇಕು .

ಆದ್ದರಿಂದಲೇ ‘ ಮಾತು ಬಲ್ಲವನಿಗೆ ಜಗಳವಿಲ್ಲ , ಊಟ ಬಲ್ಲವನಿಗೆ ರೋಗವಿಲ್ಲ ‘ ಎಂದು ಹಿರಿಯರು ಹೇಳಿರುವುದು .


Previous
Next Post »