ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ S.M. ಕೃಷ್ಣ ಅಂತ್ಯಕ್ರಿಯೆ
ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ S.M. ಕೃಷ್ಣ ಅಂತ್ಯಕ್ರಿಯೆ ನಿನ್ನೆ ನಿಧನರಾದ ಮಾಜಿ ಸಿಎಂ SM ಕೃಷ್ಣ ಅವರ ಅಂತ್ಯಸಂಸ್ಕಾರವನ್ನು ಇಂದು ಹುಟ್ಟೂರಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಬೆಳಗ್ಗೆ 8ಕ್ಕೆ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸದಾಶಿವನಗರದ ಸ್ವಗೃಹದಿಂದ ಸೋಮನಹಳ್ಳಿಗೆ ಕೊಂಡೊಯ್ಯಲಾಗುವುದು. ಬೆಳಗ್ಗೆ 10:30ಕ್ಕೆ ಮದ್ದೂರಿಗೆ ಪಾರ್ಥಿವ ಶರೀರ ತಲುಪಲಿದೆ. ಮೃತರ ಸ್ವಗ್ರಾಮ ಸೋಮನಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತದೆ. ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.


ConversionConversion EmoticonEmoticon