ಈ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್..! ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ಸಚಿವ K.H ಮುನಿಯಪ್ಪ ತಿಳಿಸಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ಮಾತನಾಡಿದ ಅವರು, 2023ರ ಮಾರ್ಚ್ ಅಂತ್ಯದವರೆಗೆ ಸಲ್ಲಿಕೆಯಾದ ಅರ್ಜಿಗಳಲ್ಲಿ ಅರ್ಹರಿಗೆ ಹೊಸ ಪಡಿತರ

ಚೀಟಿ ವಿತರಿಸಬೇಕು. ಸದ್ಯ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಿಲ್ಲ, ಅನ್ನ ಸುವಿಧಾ ಯೋಜನೆಯಲ್ಲಿ ಮನೆಗಳಿಗೆ ಆಹಾರ ಧಾನ್ಯ ತಲುಪಿಸಲು ಕ್ರಮ ಕೈಗೊಳ್ಳಲಾಗಿದ್ದು, 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದರು.