ಕನ್ನಡ ಭಾಷೆಗೆ ಇತಿಹಾಸ ಹಾಗೂ ಪರಂಪರೆ ಇದೆ. ನಟ ಕಮಲ್ ಹಾಸನ್ ಹೇಳಿಕೆಯಿಂದ ಕನ್ನಡದ ಘನತೆಗೆ ಧಕ್ಕೆ ಆಗುವುದಿಲ್ಲ. ಅವರ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕಮಲ್ ಹಾಸನ್ ನೀಡಿರುವ ಹೇಳಿಕೆ ಬಗ್ಗೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆಡಿದ ಮಾತಿನಿಂದ ಕನ್ನಡಕ್ಕೆ ತೊಂದರೆ ಆಗುವುದಿಲ್ಲ. ಈ ಬಗ್ಗೆ ಚರ್ಚೆ ಮಾಡುತ್ತ ಕಮಲ್ ಹಾಸನ್ ಅವರನ್ನು ಎತ್ತರಕ್ಕೆ ಏರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.